ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವು ಇಂದು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ರಾಜ್ಯಾದ್ಯಂತ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದ್ದು, ಕಾರ್ಕಳದಲ್ಲಿಯೂ ಮೊದಲ ಹಂತದಲ್ಲಿ ಕಾರ್ಮಿಕರಿಗೆ ಕಾರ್ಡ್ಗಳನ್ನು ವಿತರಿಸಲಾಯಿತು. ಕಾರ್ಕಳ ತಾಲೂಕಿನಲ್ಲಿ ಸಾವಿರಾರು ಬೀಡಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆ ಅವರಿಗೆ ಮಹತ್ವದ ನೆರವಾಗಲಿದೆ ಎಂದು ತಿಳಿಸಲಾಯಿತು.
ಪ್ರಸ್ತುತ ಈ ಯೋಜನೆಯಡಿ ಅಪಘಾತ ಪರಿಹಾರ ಸೌಲಭ್ಯ, ಸಹಜ ಮರಣ ಪರಿಹಾರ ಹಾಗೂ ಅಂತ್ಯಕ್ರಿಯೆ ವೆಚ್ಚ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯಲಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕಿದ್ದು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಹೋರಾಟದ ಅಗತ್ಯವಿದೆ ಎಂದು ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್ ಹೇಳಿದರು.
ಕರ್ನಾಟಕದಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು, ಈ ಸ್ಮಾರ್ಟ್ ಕಾರ್ಡ್ ಯೋಜನೆ ಅವರಿಗೆ ಸಾಮಾಜಿಕ ಭದ್ರತೆಯ ಭರವಸೆಯಾಗಿ ಪರಿಣಮಿಸಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ ಹಾಗೂ ಸಿಐಟಿಯು ಮುಖಂಡೆ ಪುಷ್ಪ ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions