ಉಡುಪಿ, ಜ.23: ನಮ್ಮ ನಾಡ ಒಕ್ಕೂಟ (ಎನ್ಎನ್ಒ)ದ ಹೊಸ ಕೇಂದ್ರ ಸಮಿತಿಯ ಪದಗ್ರಹಣ ಸಮಾರಂಭವು ಶುಕ್ರವಾರ ಸಂಜೆ ಉಡುಪಿಯ ಹೋಟೆಲ್ ರಂಜಿತಾ ಪ್ಯಾಲೇಸ್, ಮಣಿಪಾಲ್ ಇನ್ನಲ್ಲಿ ನಡೆಯಿತು. ಸಭೆ ಕುರ್ಆನ್ ಪಠಣದೊಂದಿಗೆ ಆರಂಭವಾಯಿತು.
ಒಕ್ಕೂಟದ ಉಪಾಧ್ಯಕ್ಷ ಸಲೀಮ್ ಬಾಜಿ ಕೈಕಂಬ ಸ್ವಾಗತ ಭಾಷಣ ಮಾಡಿದರು. ಪ್ರಧಾನ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ ಸಂಘಟನೆಯ ಕಾರ್ಯಚಟುವಟಿಕೆಗಳ ವರದಿ ಮಂಡಿಸಿದರು. ಚುನಾವಣಾಧಿಕಾರಿ ನಕ್ವಾ ಯಾಹ್ಯ ಮಲ್ಪೆ ಅವರು ಮುಂದಿನ ಎರಡು ವರ್ಷಗಳ ಅವಧಿಗೆ (2026–27) ಆಯ್ಕೆಯಾದ ಹೊಸ ಕೇಂದ್ರ ಸಮಿತಿಯ ಪದಾಧಿಕಾರಿಗಳನ್ನು ಘೋಷಿಸಿದರು.
ನಿರ್ಗಮನ ಅಧ್ಯಕ್ಷ ಮುಹಮ್ಮದ್ ಸಲೀಮ್ ಮೂಡುಬಿದಿರೆ ಅವರು ನೂತನ ಅಧ್ಯಕ್ಷ ಡಾ. ರಿಝ್ವಾನ್ ಅಹ್ಮದ್ ಕಾರ್ಕಳ ಅವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದರು. ಬಳಿಕ ಡಾ. ರಿಝ್ವಾನ್ ಅಹ್ಮದ್ ಕಾರ್ಕಳ ಅವರು ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಿ, ಸಂಘಟನೆಯ ಭವಿಷ್ಯದ ಕಾರ್ಯಯೋಜನೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಮುಂದಿನ ಯೋಜನೆಗಳು ಹಾಗೂ ಬಲವರ್ಧನೆ ಕುರಿತು ಚರ್ಚೆ ನಡೆಯಿತು. ಉಪಾಧ್ಯಕ್ಷ ಹುಸೇನ್ ಹೈಕಾಡಿ ವಂದನಾರ್ಪಣೆ ಮಾಡಿದರು. ಸಮಾರಂಭದಲ್ಲಿ ಜಂಟಿ ಕಾರ್ಯದರ್ಶಿ ಅಡ್ವೋಕೇಟ್ ಶೇಖ್ ಇಸ್ಹಾಕ್, ಕೋಶಾಧಿಕಾರಿ ಪೀರು ಸಾಹೇಬ್, ಕೇಂದ್ರ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions