ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕೊರಂಟಿಕಟ್ಟೆಯಲ್ಲಿರುವ ಮಸ್ಜಿದ್ ನೂರ್ ಜುಮ್ಮಾ ಮಸೀದಿಯ ನವೀಕೃತಗೊಂಡ ಭವ್ಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಇಂದು ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆ ಸದಾ ಸೌಹಾರ್ದತೆ ಮತ್ತು ಭಾವೈಕತೆಯ ನಾಡಾಗಿದ್ದು, ಇಲ್ಲಿ ಎಲ್ಲಾ ಜಾತಿ–ಧರ್ಮದವರು ಪರಸ್ಪರ ಸಹಕಾರದಿಂದ ಬದುಕುತ್ತಿರುವುದು ಜಿಲ್ಲೆಯ ವಿಶೇಷತೆ ಎಂದರು. ಧಾರ್ಮಿಕ ಕ್ಷೇತ್ರಗಳಲ್ಲಿಯೂ ಸಹಕಾರದ ಮನೋಭಾವ ಇರುವುದರಿಂದ ಸಮಾಜದಲ್ಲಿ ಶಾಂತಿ ಇಂದಿಗೂ ಉಳಿಯಲು ಸಾಧ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದರಾದ ಶ್ರೀ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಭಾವೈಕತೆಯ ಮಹತ್ವ ಹಾಗೂ ಅದರ ವಿಸ್ತಾರ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಮಸೀದಿಯ ಅಧ್ಯಕ್ಷರಾದ ಫಕ್ರುದ್ದೀನ್ ಸಾಹೇಬ್, ಅಬ್ದುಲ್ ರಝಾಕ್, ನಿತ್ಯಾನಂದ ಶೆಟ್ಟಿ, ಪ್ರವೀಣ್ ಕುಮಾರ್, ಡಾ. ಫಾರೂಕ್ ಚಂದ್ರನಗರ, ಹಂಝತ್ ಹೆಜಮಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭ ಮಸೀದಿ ನವೀಕರಣಕ್ಕೆ ಸಹಕಾರ ನೀಡಿದ ಪೊಲೀಸ್ ಇಲಾಖೆಯ ಅಧಿಕಾರಿ ಅಬ್ದುಲ್ ರಝಾಕ್, ಜೀವರಕ್ಷಕರಾದ ಮೀನುಗಾರರು, ಲೈನ್ಮ್ಯಾನ್ಗಳು ಹಾಗೂ ಸಮಾಜಸೇವಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions