Advertisement

ರಶ್ಯ ಅಧ್ಯಕ್ಷ ಪುಟಿನ್‌ಗೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಶ್ಯನ್ ಭಾಷೆಯ ಭಗವದ್ಗೀತೆ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ತಮ್ಮಿಬ್ಬರ ನಡುವಿನ ಮಾತುಕತೆ ವೇಳೆಯ ಭಾವಚಿತ್ರವನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

"ಭಗವದ್ಗೀತೆಯ ಒಂದು ಪ್ರತಿಯನ್ನು ರಶ್ಯ ಅಧ್ಯಕ್ಷ ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡಿದೆ. ಭಗವದ್ಗೀತೆಯಲ್ಲಿನ ಬೋಧನೆ ವಿಶ್ವಾದ್ಯಂತ ಇರುವ ಕೋಟ್ಯಂತರ ಮಂದಿಗೆ ಸ್ಫೂರ್ತಿದಾಯಕವಾಗಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯ ಆಹ್ವಾನದ ಮೇರೆಗೆ 23ನೇ ಭಾರತ-ರಶ್ಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ಧಾರೆ. ಇಂದು ಉಭಯ ನಾಯಕರ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯ ವೇಳೆ 10ಕ್ಕೂ ಹೆಚ್ಚು ಒಪ್ಪಂದಗಳು ಹಾಗೂ 15ಕ್ಕೂ ಹೆಚ್ಚು ಒಡಂಬಡಿಕೆ (MOU) ಪತ್ರಗಳಿಗೆ ಸಹಿ ಹಾಕಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions