ಬೆಂಗಳೂರು : ಶನಿವಾರ–ಭಾನುವಾರದ ವೀಕೆಂಡ್ ಹಾಗೂ ಸೋಮವಾರ ಗಣರಾಜ್ಯೋತ್ಸವ ರಜೆ ಇರುವ ಹಿನ್ನೆಲೆ ನಗರ ತೊರೆಯುವವರ ಸಂಖ್ಯೆ ಏಕಾಏಕಿ ಹೆಚ್ಚಿದ್ದು, ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.
22ಕ್ಕೂ ಹೆಚ್ಚು ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿರುವ ನೆಲಮಂಗಲ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಒತ್ತಡ ತೀವ್ರವಾಗಿದೆ. ತಮ್ಮ ಸ್ವಗ್ರಾಮಗಳಿಗೆ ತೆರಳುವವರು ಹಾಗೂ ಪ್ರವಾಸಿ ತಾಣಗಳತ್ತ ಹೊರಟವರಿಂದ ಹೆದ್ದಾರಿಯಲ್ಲಿ ಸಂಚಾರ ನಿಧಾನಗೊಂಡಿದೆ. ವಿಶೇಷವಾಗಿ ನೆಲಮಂಗಲ–ಕುಣಿಗಲ್ ಬೈಪಾಸ್ ಬಳಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ.
ಬಿಸಿಲಿನ ನಡುವೆ ಗಂಟೆಗಟ್ಟಲೆ ವಾಹನಗಳಲ್ಲಿ ಸಿಲುಕಿರುವ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಕೆಲವೆಡೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಂತೆ ಕಂಡುಬಂದಿದ್ದು, ಅಗತ್ಯ ಸೌಲಭ್ಯಗಳ ಕೊರತೆಯಿಂದ ಪ್ರಯಾಣಿಕರ ಅಸಮಾಧಾನ ಹೆಚ್ಚಾಗಿದೆ.
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿರದ ಕಾರಣ ಖಾಸಗಿ ವಾಹನಗಳ ಮೇಲೆ ಅವಲಂಬನೆ ಹೆಚ್ಚಿರುವುದೂ ಟ್ರಾಫಿಕ್ ಜಾಮ್ಗೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಸಂಚಾರ ಪೊಲೀಸರು ವಾಹನಗಳ ಹರಿವು ಸುಗಮಗೊಳಿಸಲು ಪ್ರಯತ್ನಿಸುತ್ತಿದ್ದರೂ, ಭಾರೀ ಸಂಖ್ಯೆಯ ವಾಹನಗಳಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತಿದೆ.
ಮುಂದಿನ ಎರಡು ದಿನಗಳಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions