ಉದ್ಯಾವರದ ಸೆಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ನಲ್ಲಿ ಪ್ಯಾರಿಸ್ ವಾರ್ಷಿಕ ಹಬ್ಬದ ಭಕ್ತಿ–ಸಾಂಸ್ಕೃತಿಕ ಕಾರ್ಯಕ್ರಮ ಭಕ್ತಾದಿಗಳ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಡಾ. ಶೇಖ್ ವಹೀದ್ ದಾವೂದ್ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಸಂದರ್ಭದಲ್ಲಿ ಅಭಿನಂದಿಸಿ ಗೌರವಿಸಲಾಯಿತು.
ಚರ್ಚ್ ಆಡಳಿತ ಸಮಿತಿಯ ಅಧ್ಯಕ್ಷ ಪ್ರಿಲ್ಸನ್ ಮಾರ್ಟಿಸ್, ಧರ್ಮಗುರುಗಳಾದ ಅನಿಲ್ ಡಿಸೋಜ, ಜುಲಿಯ ಡಿಸೋಜ, ಸ್ಟೀಫನ್ ರೋಡ್ರಿಗಸ್, ಸ್ಟೀವನ್ ಡಿಸೋಜ, ಜೊನ್ ಡಿಸೋಜ, ಸ್ಟಾನಲ್ ಡಿಸೋಜ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಪ್ಯಾರಿಶ್ನ ಭಕ್ತರು ಮತ್ತು ವಿವಿಧ ವಲಯಗಳಿಂದ ಆಗಮಿಸಿದ್ದ ಸಾರ್ವಜನಿಕರು ಕಾರ್ಯಕ್ರಮಕ್ಕೆ ವೈಭವ ನೀಡಿದರು.

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions