Advertisement

ಉಡುಪಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಯಶಸ್ವಿ ರಕ್ತದಾನ ಶಿಬಿರ

ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2ರ ಸಹಯೋಗದಲ್ಲಿ ಈ ಶಿಬಿರ ನೆರವೇರಿತು.

ಕಾರ್ಯಕ್ರಮಕ್ಕೆ ಗಣ್ಯ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಉಡುಪಿ ಘಟಕದ ಕಾರ್ಯದರ್ಶಿ ಗಣನಾಥ್ ಶೆಟ್ಟಿ ಎಕ್ಕಾರ್, ಕುಂದಾಪುರ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಹಾಗೂ ಖಜಾಂಚಿ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಅತಿಥಿಗಳು ರಕ್ತದಾನದ ಮಹತ್ವವನ್ನು ವಿವರಿಸಿ, ಇದು ಜೀವ ಉಳಿಸುವ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಪ್ರಾಂಶುಪಾಲರಾದ ಪ್ರೊ. ಸುರೇಖಾ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ರಕ್ತ ಸಂಗ್ರಹಣೆ ಸುರಕ್ಷಿತವಾಗಿ ನೆರವೇರಿಸಲಾಯಿತು.

ಈ ಶಿಬಿರವು ಯುವಜನರಲ್ಲಿ ಸೇವಾಭಾವನೆ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸಿತು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಡಾ. ಪ್ರೀತಿ ಹರೀಶ್ ರಾಜ್, ಕಾನೂನು ವಿಭಾಗದ ಮುಖ್ಯಸ್ಥೆ ಡಾ. ಜಯಮೋಲ್ ಪಿ. ಎಸ್., ಮಾನವಿಕ ವಿಭಾಗದ ಮುಖ್ಯಸ್ಥ ಪ್ರೊ. ರೋಹಿತ್ ಎಸ್. ಅಮೀನ್, ಯುವ ರೆಡ್ ಕ್ರಾಸ್ ಸಂಯೋಜಕ ಈರಪ್ಪ ಎಸ್. ಮೇಧರ್, ಎನ್‌ಎಸ್‌ಎಸ್ ಸಂಯೋಜಕರಾದ ಡಾ. ನವೀನ್ ಚಂದ್ರ, ಅಮೋಘ ಗಡ್ಕರ್, ಯುವ ರೆಡ್ ಕ್ರಾಸ್ ಕಾರ್ಯದರ್ಶಿಗಳಾದ ನವೀನ್ ಮತ್ತು ಶ್ರನ್ಯ, ಎನ್‌ಎಸ್‌ಎಸ್ ಕಾರ್ಯದರ್ಶಿಗಳಾದ ಸಮೀರ್, ರಕ್ಷಿತಾ, ಅಂಕಿತ ಹಾಗೂ ಸಂದೇಶ್ ಸೇರಿದಂತೆ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions