ಉಡುಪಿ ನಗರದ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜುಲೈ 31, ಆಗಸ್ಟ್ 1 ಹಾಗೂ 2ರಂದು ಮೂರು ದಿನಗಳ **ಬೃಹತ್ ಸ್ವದೇಶಿ ಖಾದ್ಯ ಮೇಳ** ಆಯೋಜಿಸಲಾಗಿದೆ.

ಸ್ಥಳೀಯ ಉತ್ಪನ್ನಗಳು, ಸ್ವದೇಶಿ ಆಹಾರ ಸಂಸ್ಕೃತಿ ಹಾಗೂ ಸ್ವ ಉದ್ಯೋಗಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಡೆಯುವ ಈ ಮೇಳದಲ್ಲಿ ವಿವಿಧ ಬಗೆಯ ಸ್ವದೇಶಿ ಆಹಾರ ಖಾದ್ಯಗಳು, ಮನೆಯಲ್ಲಿ ತಯಾರಿಸಿದ ಮಸಾಲೆ ಪದಾರ್ಥಗಳು, ಕೈಮಗ್ಗ ಸೀರೆಗಳ ಪ್ರದರ್ಶನ ಮತ್ತು ಮಾರಾಟ, ಕರಕುಶಲ ವಸ್ತುಗಳು ಹಾಗೂ ಗೃಹೋಪಯೋಗಿ ವಸ್ತುಗಳ ಮೇಳ ವಿಶೇಷ ಆಕರ್ಷಣೆಯಾಗಲಿದೆ.
ಸ್ವ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರು, ಸಣ್ಣ ಉದ್ಯಮಿಗಳು ಹಾಗೂ ಸ್ಥಳೀಯ ಉತ್ಪಾದಕರಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲು ಇದು ಉತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವದೇಶಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಸ್ಥಳೀಯ ಉದ್ಯಮಿಗಳನ್ನು ಬೆಂಬಲಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಕುಟುಂಬ ಸಮೇತರಾಗಿ ಆಗಮಿಸಿ, ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಈ ಮೂರು ದಿನಗಳ ಮೇಳವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions